Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:14 - ಪರಿಶುದ್ದ ಬೈಬಲ್‌

14 ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾ ಜೆಜುನ್ ತ್ಯಾ ಮಾನ್ಸಾಕ್ “ಕೊನಾಕ್ಬಿ ಸಾಂಗುನಕ್ಕೊ, ಖರೆ ಯಾಜಕಾಕ್ಡೆ ಜಾ ಅನಿ ತುಕಾಚ್ ತೆಕಾ ದಾಕ್ವು, ಮಾನಾ ಸಗ್ಳ್ಯಾಕ್ನಿ ತಿಯಾ ಶುದ್ದ್ ಹೊಲೆ ಮನುನ್ ದಾಕ್ವುಸಾಟ್ನಿ ಮೊಯ್ಜೆನ್ ಸಾಂಗಟಲ್ಲಿ ಬಲಿ ಭೆಟ್ವು” ಮನುನ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:14
12 ತಿಳಿವುಗಳ ಹೋಲಿಕೆ  

ಯೇಸು ಅವರನ್ನು ನೋಡಿ, “ಹೋಗಿ, ನಿಮ್ಮನ್ನು ಯಾಜಕರಿಗೆ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಯಾಜಕರ ಬಳಿಗೆ ಹೋಗುತ್ತಿದ್ದಾಗ ಅವರಿಗೆ ವಾಸಿಯಾಯಿತು.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು.


ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.


“ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.


ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”


ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”


ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.


ಹಸಿರು ಅಥವಾ ಕೆಂಪು ಬಣ್ಣದ ಬೂಷ್ಟು ಬಟ್ಟೆಯ, ಚರ್ಮದ, ನೇಯ್ದ ಮತ್ತು ಹೆಣೆದ ಸಾಮಗ್ರಿಗಳ ಮೇಲೆ ಇದ್ದರೆ, ಆಗ ಅದನ್ನು ಯಾಜಕನಿಗೆ ತೋರಿಸಬೇಕು.


ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು