Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:17 - ಪರಿಶುದ್ದ ಬೈಬಲ್‌

17 ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಕ್ ದಿಸ್ ಜೆಜು ಲೊಕಾಕ್ನಿ ಶಿಕ್ವುತಾನಾ ಉಲ್ಲೆ ಫಾರಿಜೆವ್, ಅನಿ ಖಾಯ್ದೆ ಶಿಕ್ವುತಲಿ ಲೊಕಾ ಗಾಲಿಲಿಯಾಚ್ಯಾ ಅನಿ ಜುದೆಯಾಚ್ಯಾ ಸಗ್ಳ್ಯಾ ಗಾಂವಾನಿತ್ನಾ, ಅನಿ ಜೆರುಜಲೆಮ್ ಶಾರಾತ್ನಾ ಯೆಲ್ಲ್ಯಾನಿ. ತೆನಿಬಿ, ತ್ಯಾ ಲೊಕಾತ್ನಿ ಬಸಲ್ಲ್ಯಾನಿ. ಸರ್ವೆಸ್ವರಾನ್ ಜೆಜುಕ್ ಶಿಕ್ ಹೊತ್ತ್ಯಾಕ್ನಿ ಗುನ್ ಕರ್‍ತಲಿ ತಾಕತ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:17
20 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!


ಅದಕ್ಕೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು! ನನ್ನಿಂದ ಶಕ್ತಿ ಹೊರಟದ್ದು ನನಗೆ ತಿಳಿಯಿತು” ಎಂದು ಹೇಳಿದನು.


ದೇವರು ಪೌಲನ ಕೈಯಿಂದ ಬಹು ವಿಶೇಷವಾದ ಮಹತ್ಕಾರ್ಯಗಳನ್ನು ಮಾಡಿಸುತ್ತಿದ್ದನು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.


ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಬಂದರು. ಅವರು ಯೇಸುವಿನ ಸುತ್ತಲೂ ಒಟ್ಟಿಗೆ ಸೇರಿದರು.


ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು.


ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು,


ಆದರೆ ಸತ್ಯಮಾರ್ಗವನ್ನು ಅನುಸರಿಸುವವನು ಬೆಳಕಿಗೆ ಬರುತ್ತಾನೆ. ಅವನು ಮಾಡಿರುವ ಕಾರ್ಯಗಳೆಲ್ಲಾ ದೇವರ ಮೂಲಕವಾಗಿ ಮಾಡಿದ ಕಾರ್ಯಗಳೆಂದು ಬೆಳಕು ತೋರಿಸುತ್ತದೆ.


ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.


ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.


ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.


ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.


ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.


ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.


ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.


ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.


ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?


ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು