Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:26 - ಪರಿಶುದ್ದ ಬೈಬಲ್‌

26 ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ ಸಗ್ಳೆ ಜಾನಾ ಎಗ್ದಮ್ ಅಜಾಪ್ ಹೊಲೆ, ಅನಿ “ಕಸ್ಲೆ ಮೊಟೆ ವಿಚಿತ್ರ್ ಅಮಿ ಬಗಟ್ಲ್ಯಾವ್” ಮನುನ್ಗೆತ್ ಭಿಂಯಾನ್ ತೆನಿ ದೆವಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:26
13 ತಿಳಿವುಗಳ ಹೋಲಿಕೆ  

ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.


ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.


ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು.


ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು,


ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.


ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು