Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:13 - ಪರಿಶುದ್ದ ಬೈಬಲ್‌

13 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂತ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದಿಸ್ ಉಜ್ವಾಡಲ್ಲ್ಯಾ ತನ್ನಾ ಅಪ್ನಾಚ್ಯಾ ಸಗ್ಳ್ಯಾ ಶಿಸಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ ಅಪೊಸ್ತಲಾ ಮನುನ್ ನಾವ್ ದಿಲ್ಲ್ಯಾ ಬಾರಾ ಜಾನಾಕ್ನಿ ತೆನಿ ಎಚುನ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:13
20 ತಿಳಿವುಗಳ ಹೋಲಿಕೆ  

ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.


ಯೇಸು ಉಪದೇಶಿಸಲು ಕಳುಹಿಸಿದ್ದ ಅಪೊಸ್ತಲರು ಮರಳಿಬಂದು ತಾವು ಮಾಡಿದ ಮತ್ತು ಉಪದೇಶಿಸಿದ ಸಂಗತಿಗಳನ್ನೆಲ್ಲ ಆತನಿಗೆ ತಿಳಿಸಿದರು.


ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಾಗಿ ಕರೆದು ಅವರನ್ನು ಇಬ್ಬರಿಬ್ಬರಾಗಿ ಹೊರಗೆ ಕಳುಹಿಸಿದನು. ಯೇಸು ಅವರಿಗೆ ದೆವ್ವಗಳ ಮೇಲೆ ಅಧಿಕಾರವನ್ನು ನೀಡಿದನು.


ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.


ಪರಿಶುದ್ಧರಾದ ಪ್ರವಾದಿಗಳು ಹಿಂದಿನಕಾಲದಲ್ಲಿ ಹೇಳಿದ್ದನ್ನು ನೀವು ಜ್ಞಾಪಿಸಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ನಮ್ಮ ರಕ್ಷಕನಾದ ಪ್ರಭುವು ನಿಮ್ಮ ಅಪೊಸ್ತಲರ ಮೂಲಕ ನೀಡಿದ ಆಜ್ಞೆಯನ್ನು ನೆನಪು ಮಾಡಿಕೊಳ್ಳಿರಿ.


ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,


ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು