Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:14 - ಪರಿಶುದ್ದ ಬೈಬಲ್‌

14 ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಯಾರಾರಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಂಚಿ ನಾವಾ - ಸಿಮಾವ್ ಹೆಕಾ ತೆನಿ ಪೆದ್ರು ಮನುನ್ ನಾವ್ ದಿಲ್ಯಾನ್ ಅನಿ ತೆಚೊ ಭಾವ್ ಅಂದ್ರು; ಜಾಕೊಬ್ ಅನಿ ಜುವಾಂವ್, ಫಿಲಿಪ್ ಅನಿ ಬಾರ್‍ತೊಲೊಮೆವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:14
23 ತಿಳಿವುಗಳ ಹೋಲಿಕೆ  

ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ನೋಡಿದನು. ಅವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿದ್ದರು. ಅವರು ಮೀನು ಹಿಡಿಯಲು ತಮ್ಮ ಬಲೆಗಳನ್ನು ಸರಿಪಡಿಸಿಕೊಳ್ಳುತ್ತಿದ್ದರು. ಯೇಸು ಇವರನ್ನು ಕರೆದನು.


ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಯಾಕೋಬನು ಯೋಹಾನನ ಅಣ್ಣ.


ಫಿಲಿಪ್ಪನು ಯೇಸುವಿಗೆ, “ಪ್ರಭುವೇ, ನಮಗೆ ತಂದೆಯನ್ನು ತೋರಿಸು. ನಮಗೆ ಅಷ್ಟೇ ಸಾಕು” ಎಂದು ಹೇಳಿದನು.


ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ.


ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.


ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.


ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.) ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು.


ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.


ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು.


ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು.


ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,


ಯೇಸುವು ಈ ಹನ್ನೆರಡು ಮಂದಿಯನ್ನು ಆರಿಸಿಕೊಂಡನು: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರನ್ನಿತ್ತನು),


ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:


ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು