Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:15 - ಪರಿಶುದ್ದ ಬೈಬಲ್‌

15 ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾತೆವ್ ಅನಿ ಥೊಮಸ್, ಅಲ್ಫೆವಾಚೊ ಲೆಕ್ ಜಾಕೊಬ್,ಅನಿ ದೆಸ್‍ಭಕ್ತ್ ಮನುನ್ ಬಲ್ವುತಲೊ ಸಿಮಾವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:15
14 ತಿಳಿವುಗಳ ಹೋಲಿಕೆ  

ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.


ಬಳಿಕ ಯಾಕೋಬನು, “ನನ್ನ ಸಹೋದರರೇ, ನನಗೆ ಕಿವಿಗೊಡಿರಿ.


ಯೇಸು ಬಂದಾಗ ದಿದುಮನೆಂಬ ತೋಮನು ಶಿಷ್ಯರೊಂದಿಗೆ ಇರಲಿಲ್ಲ. ಹನ್ನೆರಡು ಮಂದಿ ಶಿಷ್ಯರಲ್ಲಿ ತೋಮನೂ ಒಬ್ಬನಾಗಿದ್ದನು.


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.


ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.


ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,


ಯೂದ (ಯಾಕೋಬನ ಮಗ) ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು