Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:20 - ಪರಿಶುದ್ದ ಬೈಬಲ್‌

20 ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಬಗಟ್ಲ್ಯಾನ್ ಅನಿ, ಗರಿಬಾನೊ ತುಮಿ ಸುಖಿ; ದೆವಾಚೊ ರಾಜ್ ತುಮ್ಚೊಚ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:20
35 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.


“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.


ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ.


ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.


“ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.


ದುಷ್ಟನ ಶ್ರೀಮಂತಿಕೆಗಿಂತಲೂ ನೀತಿವಂತನ ಬಡತನವೇ ಮೇಲು.


ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು