Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:6 - ಪರಿಶುದ್ದ ಬೈಬಲ್‌

6 ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೊಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತೊಂದು ಸಬ್ಬತ್‍ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಎಕ್ ಸಬ್ಬತಾಚ್ಯಾ ದಿಸಿ ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ಶಿಕ್ವುಲ್ಯಾನ್. ಥೈ ಉಜ್ವ್ಯಾ ಹಾತಿಕ್ ವಾರೆಮಾರಲ್ಲೊ ಎಕ್ ಮಾನುಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:6
14 ತಿಳಿವುಗಳ ಹೋಲಿಕೆ  

ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.


ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್‌ದಿನದಂದು ಯೇಸು ಜನರಿಗೆ ಉಪದೇಶಿಸಿದನು.


ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.


ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ? ತಪ್ಪೋ?” ಎಂದು ಕೇಳಿದನು.


ಒಂದು ಸಬ್ಬತ್‌ದಿನ ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು.


ಒಂದಾನೊಂದು ಸಬ್ಬತ್‌ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು.


ಬೇತೇಲಿನ ಯಜ್ಞವೇದಿಕೆಯನ್ನು ಕುರಿತು ದೇವಮನುಷ್ಯನು ಹೇಳಿದ ಸಂದೇಶವು ರಾಜನಾದ ಯಾರೊಬ್ಬಾಮನಿಗೆ ಕೇಳಿಸಿತು. ಅವನು ತನ್ನ ಕೈಯನ್ನು ಯಜ್ಞವೇದಿಕೆಯಿಂದ ಥಟ್ಟನೆ ತೆಗೆದು, ಆ ಮನುಷ್ಯನ ಕಡೆಗೆ ಗುರಿಮಾಡಿ, “ಆ ಮನುಷ್ಯನನ್ನು ಹಿಡಿಯಿರಿ!” ಎಂದು ಹೇಳಿದನು. ಆದರೆ ರಾಜನು ಇದನ್ನು ಹೇಳಿದಾಗ, ಅವನ ಕೈಗೆ ಲಕ್ವ ಹೊಡೆಯಿತು. ಅವನು ಅದನ್ನು ಚಲಿಸಲಾಗಲಿಲ್ಲ,


ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೆ. ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿಹಾಕಿರಿ, ಮತ್ತು ಬಲಗಣ್ಣನ್ನು ಕಿತ್ತುಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು, ಬಲಗಣ್ಣು ದೃಷ್ಟಿಹೀನವಾಗುವದು.


“ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು