Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:13 - ಪರಿಶುದ್ದ ಬೈಬಲ್‌

13 ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜುನ್ ತಿಕಾ ಬಗಟಲ್ಲ್ಯಾ ತನ್ನಾ, ಜೆಜುಕ್ ತಿಚೊ ಪಾಪ್‍ ದಿಸ್ಲೊ, ಅನಿ ತೆನಿ ತಿಕಾ ರಡುನಕೊ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:13
36 ತಿಳಿವುಗಳ ಹೋಲಿಕೆ  

ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಸತ್ತುಹೋದ ಆ ಬಾಲಕಿಗಾಗಿ ಜನರೆಲ್ಲರೂ ದುಃಖದಿಂದ ಗೋಳಾಡುತ್ತಿದ್ದರು. ಆದರೆ ಯೇಸು ಅವರಿಗೆ, “ಅಳಬೇಡಿ, ಆಕೆ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ” ಎಂದನು.


ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.


“ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ.


ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.


ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.


“ಪ್ರಭುವು (ಯೇಸು) ಸತ್ತವರೊಳಗಿಂದ ನಿಜವಾಗಿ ಎದ್ದಿದ್ದಾನೆ! ಆತನು ಸೀಮೋನನಿಗೆ (ಪೇತ್ರ) ಕಾಣಿಸಿಕೊಂಡನು” ಎಂದು ಹೇಳಿದರು.


ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು.


ದುಃಖದಿಂದಿರುವ ಜನರು ದುಃಖವಿಲ್ಲದವರಂತೆ ಜೀವಿಸಬೇಕು. ಸಂತೋಷದಿಂದ ಇರುವ ಜನರು ಸಂತೋಷವಿಲ್ಲದ ಜನರಂತೆ ಜೀವಿಸಬೇಕು. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಏನೂ ಇಲ್ಲದವರಂತೆ ಜೀವಿಸಬೇಕು.


ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು.


ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!


ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.


“ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.


ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆಂಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರಂತೆ ನೀವು ದುಃಖದಿಂದಿರುವುದು ನಮಗೆ ಇಷ್ಟವಿಲ್ಲ.


ಆಗ ಪ್ರಭುವು (ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.


ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು.


ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.


ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.


ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ.


ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.


ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.


ಪ್ರಭುವು ಈ ಸಾಮ್ಯವನ್ನು ಹೇಳಿದ ಮೇಲೆ ತನ್ನ ಶಿಷ್ಯರಿಗೆ, “ಕೇಳಿರಿ! ಆ ಅನ್ಯಾಯಗಾರನಾದ ನ್ಯಾಯಾಧೀಶನು ಹೇಳಿದ್ದರಲ್ಲಿ ಅರ್ಥವಿದೆ.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ.


ತಾನು ಯೋಹಾನನಿಗಿಂತಲೂ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಿರುವ ಸುದ್ದಿಯು ಫರಿಸಾಯರಿಗೆ ತಿಳಿಯಿತೆಂಬುದು ಯೇಸುವಿಗೆ ಗೊತ್ತಾಯಿತು.


ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.


ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು