Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:16 - ಪರಿಶುದ್ದ ಬೈಬಲ್‌

16 ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆ ಬಗುನ್ ಸಗ್ಳೆಜಾನ್ ಭಿಂವ್ನ್ ಗೆಲೆ ಅನಿ ತೆನಿ ದೆವಾಕ್ ಹೊಗ್ಳುನ್ಗೆತ್. “ಎಕ್ ಮೊಟೊ ಪ್ರವಾದಿ ಅಮ್ಚ್ಯಾ ಮದ್ದಿ ಯೆಲಾ! ದೆವ್ ಅಪ್ನಾಚ್ಯಾ ಲೊಕಾಕ್ನಿ ಹುರ್ವುನ್ ಘೆವ್ಕ್ ಮನುನ್ ಯೆಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:16
31 ತಿಳಿವುಗಳ ಹೋಲಿಕೆ  

ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.


“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.


ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.


ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.


ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ.


ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.


ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.


ಅನನೀಯನು ಇದನ್ನು ಕೇಳಿದ ಕೂಡಲೇ ಕೆಳಗೆ ಬಿದ್ದು ಸತ್ತುಹೋದನು. ಕೆಲವು ಯೌವನಸ್ಥರು ಬಂದು ಅವನ ದೇಹವನ್ನು ಬಟ್ಟೆಯಲ್ಲಿ ಸುತ್ತಿದರು. ಅವರು ಅದನ್ನು ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಇದರ ಬಗ್ಗೆ ಕೇಳಿದ ಪ್ರತಿಯೊಬ್ಬರೂ ಭಯಭ್ರಾಂತರಾದರು.


ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.


ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.


ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ.


ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.


ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.


ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.


ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.


ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು,


“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು.


ಆಗ ಅವನು ಎದ್ದು ಕುಳಿತುಕೊಂಡು ಮಾತಾಡತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು