Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:21 - ಪರಿಶುದ್ದ ಬೈಬಲ್‌

21 ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ ಉಪದ್ರವ ದೆವ್ವ ಇಂಥವುಗಳಿಂದ ಬಿಡಿಸಿ ವಾಸಿಮಾಡಿದನು; ಮತ್ತು ಅನೇಕ ಮಂದಿ ಕುರುಡರಿಗೆ ಕಣ್ಣನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾಚ್ ಜೆಜುನ್ ಸುಮಾರ್ ಲೊಕಾಂಚಿ ದುಕ್ನಿ, ರೊಗಾ ಆರಾಮ್ ಕರ್‍ಲ್ಯಾನ್, ಅನಿ ಗಿರೆ ಸೊಡ್ವುಲ್ಯಾನ್,ಅನಿ ಸುಮಾರ್ ಕುಡ್ಡ್ಯಾಕ್ನಿ ಡೊಳೆ ದಿಸಿ ಸರ್ಕೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:21
12 ತಿಳಿವುಗಳ ಹೋಲಿಕೆ  

ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.


ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.”


ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.


ಮುಟ್ಟಿದ ಕೂಡಲೆ, ಆಕೆಯ ರಕ್ತಸ್ರಾವ ನಿಂತುಹೋಯಿತು. ತನಗೆ ಗುಣವಾಯಿತೆಂಬುದು ಆಕೆಗೆ ಅರಿವಾಯಿತು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


“ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.


“ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು