Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:30 - ಪರಿಶುದ್ದ ಬೈಬಲ್‌

30 ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಲ್ಲಿ ತಮ್ಮ ವಿಷಯವಾಗಿ ದೇವರ ಸಂಕಲ್ಪವನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಫಾರಿಜೆವಾನಿ, ಅನಿ ಖಾಯ್ದೆ ಶಿಕ್ವುತಲ್ಯಾನಿ, ಅಪ್ನಾಸಾಟ್ನಿಚ್ ಮನುನ್ ಹೊತ್ತ್ಯಾ ದೆವಾಚ್ಯಾ ಯವ್ಜನ್ಯಾಕ್ನಿ, ತೆನಿ ಮರ್ಯಾದ್‍ ದಿವ್ಕನ್ಯಾತ್, ಅನಿ ಜುಂವಾವಾಕ್ನಾ ಬಾಲ್ತಿಮ್ ಘೆವ್ಕ್ ನಕ್ಕೊ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:30
11 ತಿಳಿವುಗಳ ಹೋಲಿಕೆ  

“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


“‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದರೆ ಇಸ್ರೇಲಿನ ಜನರ ಬಗ್ಗೆ ದೇವರು: “ನಾನು ಆ ಜನರಿಗಾಗಿ ದಿನವೆಲ್ಲಾ ಕಾದುಕೊಂಡಿದ್ದೆನು, ಆದರೆ ಅವರು ವಿಧೇಯರಾಗಲಿಲ್ಲ; ನನ್ನನ್ನು ಹಿಂಬಾಲಿಸಲಿಲ್ಲ” ಎನ್ನುತ್ತಾನೆ.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವೀಣನಾಗಿದ್ದ ಫರಿಸಾಯನೊಬ್ಬನು ಯೇಸುವನ್ನು ಪರೀಕ್ಷಿಸಲು,


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.


ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.


“ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?


‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು