Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:39 - ಪರಿಶುದ್ದ ಬೈಬಲ್‌

39 ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತ್ಯಾ ಫಾರಿಜೆವಾನ್ ಹೆ ಬಗುನ್, ಅಪ್ಲ್ಯಾ ಅಪ್ನಿಚ್ “ಹ್ಯೊ ಮಾನುಸ್ ಖರೆಚ್ ಪ್ರವಾದಿ ಹೊಲ್ಯಾರ್,ತೆಕಾ ಅಪಡಲ್ಲಿ ಬಾಯ್ಕೊಮನುಸ್ ಕೊನ್; ಅನಿ ಹಿ ಬಾಯ್ಕೊಮನುಸ್ ಕಸ್ಲೆ ಪಾಪಾಚೆ ಜಿವನ್ ಕರ್‍ತಾ ಮನುನ್, ಹೆಕಾ ಕಳ್ತಲೆ ಹೊತ್ತೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:39
25 ತಿಳಿವುಗಳ ಹೋಲಿಕೆ  

ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.


ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.


ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,


ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”


ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.


ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.


ಆ ಸ್ತ್ರೀಯು, “ಅಯ್ಯಾ, ನೀನು ಪ್ರವಾದಿಯೆಂದು ಕಾಣುತ್ತದೆ.


ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.


“ಆಗ, ಆ ಮೇಲ್ವಿಚಾರಕನು ತನ್ನೊಳಗೆ, ‘ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.


ಆ ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ ಸ್ವಲ್ಪ ಪರಿಮಳತೈಲವನ್ನು ತೆಗೆದುಕೊಂಡು ಬಂದಳು.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.


ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.


ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,


ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು.


“ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.”


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.


ಅದಕ್ಕೆ ಯೇಸು ಫರಿಸಾಯನಿಗೆ, “ಸಿಮೋನನೇ, ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದನು. ಸಿಮೋನನು, “ಗುರುವೇ, ಹೇಳು!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು