Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:10 - ಪರಿಶುದ್ದ ಬೈಬಲ್‌

10 ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಘುಟಾಚಿ ಸಮ್ಜನ್ ತುಮ್ಕಾ ಎವ್ಡೆಚ್ ದಿಲ್ಲೆ ಹಾಯ್. ಖರೆ ದುಸ್ರ್ಯಾಕ್ನಿ ತೊ ಘುಟ್ ಕಾನಿಯಾಂಚ್ಯಾ ವೈನಾಚ್ ಸಾಂಗುನ್ ಹೊತಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕಾಯ್ಬಿ ಕಳಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:10
24 ತಿಳಿವುಗಳ ಹೋಲಿಕೆ  

ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’


ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ.


ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.


ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಪವಿತ್ರಾತ್ಮನು ಒಬ್ಬನೇ. ಆತನೇ ಎಲ್ಲಾ ವರಗಳನ್ನು ತನ್ನ ಚಿತ್ತಕ್ಕನುಸಾರವಾಗಿ ಪ್ರತಿಯೊಬ್ಬನಿಗೂ ಹಂಚಿಕೊಟ್ಟು ನಡೆಸುತ್ತಾನೆ.


“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.


ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು