Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:31 - ಪರಿಶುದ್ದ ಬೈಬಲ್‌

31 ತಮ್ಮನ್ನು ಪಾತಾಳಕ್ಕೆ ಕಳುಹಿಸಕೂಡದೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಗಿರ್‍ಯಾನಿ ಅಪ್ನಾಕ್ ಪಾತಾಳಾಕ್ ಧಾಡುನಕ್ಕೊ, ಮನುನ್ ಜೆಜುಕ್ಡೆ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:31
14 ತಿಳಿವುಗಳ ಹೋಲಿಕೆ  

“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.


ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.


ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.


ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.


ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.


ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.


“‘ಯಾರು ಪಾತಾಳಕ್ಕೆ ಇಳಿದುಹೋಗಬಲ್ಲರು’ ಎಂದಾಗಲಿ ಹೇಳಬೇಡಿ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು