Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:37 - ಪರಿಶುದ್ದ ಬೈಬಲ್‌

37 ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ತ್ಯಾ ಜಾಗ್ಯಾ ವೈಲಿ ಸಗ್ಳಿ ಲೊಕಾ ಜೆಜುಕ್ ಅಮ್ಚೆ ಗಾಂವ್ ಸೊಡುನ್ ಜಾ ಮನುಕ್‍ಲಾಲಿ, ಕಶ್ಯಾಕ್ ಮಟ್ಲ್ಯಾರ್, ತೆನಿ ಭಿಂಯಾವಲ್ಲ್ಯಾನಿ, ತಸೆ ಮನುನ್ ಜೆಜು ಢೊನಿತ್ ಚಡ್ಲೊ, ಅನಿ ಜಾವ್ಕಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:37
16 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.


ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”


ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಆಗ ಜನರು ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು.


ಆಗ ಪಟ್ಟಣದ ಜನರೆಲ್ಲರೂ ಯೇಸುವನ್ನು ನೋಡಲು ಹೋಗಿ, ತಮ್ಮ ಸ್ಥಳವನ್ನು ಬಿಟ್ಟುಹೋಗಬೇಕೆಂದು ಆತನನ್ನು ಬೇಡಿಕೊಂಡರು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


“ಈ ಪವಿತ್ರ ಪೆಟ್ಟಿಗೆಯನ್ನು ನೋಡಿಕೊಳ್ಳಬಲ್ಲ ಯಾಜಕನೆಲ್ಲಿದ್ದಾನೆ? ಈ ಪೆಟ್ಟಿಗೆಯು ಇಲ್ಲಿಂದ ಎಲ್ಲಿಗೆ ಹೋಗಬೇಕಾಗಿದೆ?” ಎಂದು ಬೇತ್‌ಷೆಮೆಷಿನ ಜನರು ಪ್ರಶ್ನಿಸಿದರು.


ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.


ಯೇಸು ಆ ಮನುಷ್ಯನನ್ನು ಗುಣಪಡಿಸಿದ ರೀತಿಯನ್ನು ನೋಡಿದ್ದವರು ಆತನನ್ನು ನೋಡಲು ಬಂದ ಜನರೆಲ್ಲರಿಗೂ ಆ ಘಟನೆಯನ್ನು ವಿವರಿಸಿ ಹೇಳಿದರು.


ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು