Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:39 - ಪರಿಶುದ್ದ ಬೈಬಲ್‌

39 ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ಯೇಸು, “ನಿನ್ನ ಮನೆಗೆ ಹಿಂದಿರುಗಿಹೋಗು, ದೇವರು ನಿನಗೆ ಎಂಥಾ ಉಪಕಾರ ಮಾಡಿದ್ದಾರೆಂಬುದನ್ನು ಪ್ರಕಟಿಸು,” ಎಂದು ಅವನನ್ನು ಬೀಳ್ಕೊಟ್ಟರು. ಅವನು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ಊರಿನಲ್ಲೆಲ್ಲಾ ಪ್ರಚಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು - ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ವಿವರವಾಗಿ ಹೇಳು ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅನಿ “ತುಜ್ಯಾ ಘರಾಕ್ ಜಾ, ಅನಿ ತುಜ್ಯಾ ಘರಾತ್ಲ್ಯಾಕ್ನಿ ದೆವಾನ್ ಕಾಯ್-ಕಾಯ್ ಕರ್‍ಲ್ಯಾನ್ ತೆ ಸಾಂಗ್”, ಮನುನ್ ಸಾಂಗ್ಲ್ಯಾನ್. ತೊ ಮಾನುಸ್ ಶಾರಾತ್ ಗೆಲೊ,ಅನಿ ಜೆಜುನ್ ಅಪ್ನಾಕ್ ಕಾಯ್-ಕಾಯ್ ಕರಲ್ಲೆ ಸಗ್ಳೆ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:39
13 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.


“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.


ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ.


ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.


ದೇವಭಕ್ತರೆಲ್ಲರೂ ಬನ್ನಿರಿ, ದೇವರು ನನಗೋಸ್ಕರ ಮಾಡಿರುವುದನ್ನು ನಿಮಗೆ ತಿಳಿಸುವೆನು.


ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.


ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.


ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.


ಯೇಸು ಗಲಿಲಾಯಕ್ಕೆ ಹಿಂತಿರುಗಿದಾಗ ಜನರು ಆತನನ್ನು ಸ್ವಾಗತಿಸಿದರು. ಪ್ರತಿಯೊಬ್ಬರೂ ಆತನಿಗಾಗಿ ಕಾಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು