Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:41 - ಪರಿಶುದ್ದ ಬೈಬಲ್‌

41 ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಬಿದ್ದನು. ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ಸಾಯುವವಳಾಗಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಆತನು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಆತನನ್ನು ಇರಿಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ಜಾಯಿರ್ ಮನ್ತಲೊ ಎಕ್ ಮಾನುಸ್ ಯೆಲೊ, ತೊ ಥೈತ್ಲ್ಯಾ ಸಿನಾಗೊಗಾಚೊ ಅದಿಕಾರಿ ಹೊವ್ನ್ ಹೊತ್ತೊ; ತೊ ಎಗ್ದಮ್ ಜೆಜುಚ್ಯಾ ಪಾಂಯಾತ್ ಪಡ್ಲೊ, ಅನಿ ಜೆಜುಕ್ ಅಪ್ನಾಚ್ಯಾ ಘರಾಕ್ಡೆ ಯೆ, ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:41
15 ತಿಳಿವುಗಳ ಹೋಲಿಕೆ  

ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.


ಯೇಸು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿರದ ಅಧಿಕಾರಿಯ (ಯಾಯಿರನ) ಮನೆಯಿಂದ ಒಬ್ಬ ವ್ಯಕ್ತಿ ಬಂದು, “ನಿನ್ನ ಮಗಳು ಸತ್ತುಹೋದಳು! ಈಗ ಬೋಧಕನಿಗೆ (ಯೇಸುವಿಗೆ) ತೊಂದರೆ ಕೊಡಬೇಡ” ಎಂದು ಹೇಳಿದನು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.)


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ಮಾರ್ಥಳು ಯೇಸುವಿಗೆ, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ.


ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು