Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:12 - ಪರಿಶುದ್ದ ಬೈಬಲ್‌

12 ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊತ್ತು ಇಳಿಯುತ್ತಾ ಬಂತು. ಆ ಹನ್ನೆರಡು ಮಂದಿ ಶಿಷ್ಯರು ಆತನ ಬಳಿಗೆ ಬಂದು - ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಇಳುಕೊಂಡು ಊಟಕ್ಕೆ ಬೇಕಾದ ಪದಾರ್ಥಗಳನ್ನು ದೊರಕಿಸಿಕೊಳ್ಳಲಿ; ನಾವು ಇಲ್ಲಿ ಅಡವಿಯ ಸ್ಥಳದಲ್ಲಿ ಇದ್ದೇವಲ್ಲಾ ಎಂದು ಆತನಿಗೆ ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದಿಸ್ ಬುಡುಕ್ ಯೆಲ್ಲ್ಯಾತನ್ನಾ ಬಾರಾ ಜಾನಾ ಶಿಸಾ ಜೆಜುಕ್ಡೆ ಗೆಲಿ, ಅನಿ “ಲೊಕಾಕ್ನಿ ಧಾಡುನ್ ದಿ, ತೆನಿ ಜಾವ್ನ್ ಗಾಂವಾತ್ನಿ, ಅನಿ ಶೆತಾತ್ನಿ ಅಪ್ನಾಕ್ ಜೆವ್ಕ್ ಅನಿ ರಾವ್ಕ್ ಕಾಯ್ತರ್ ಯವಸ್ತಾ ಕರುನ್ ಘೆಂವ್ದಿತ್, ಅದ್ದಿಚ್ ಹ್ಯೊ ಜಾಗೊ ಬಗಟ್ಲ್ಯಾರ್, ಕಡೆಕ್ ಕಾಡುನ್ ಟಾಕಲ್ಲ್ಯಾ ಸಾರ್ಕೊ ಹಾಯ್”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:12
13 ತಿಳಿವುಗಳ ಹೋಲಿಕೆ  

ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.


ಮರುಭೂಮಿಯಲ್ಲಿ ನಿಮ್ಮನ್ನು ತಿಳಿದುಕೊಂಡಿದ್ದೆನು. ಆ ಒಣಭೂಮಿಯಲ್ಲಿ ನಾನು ನಿಮ್ಮನ್ನು ಬಲ್ಲೆನು.


ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.


ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.


ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.


ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.


ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು