Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:28 - ಪರಿಶುದ್ದ ಬೈಬಲ್‌

28 ಯೇಸು ಈ ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರಕೊಂಡು ಪ್ರಾರ್ಥನೆಮಾಡುವದಕ್ಕೆ ಬೆಟ್ಟವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಸಗ್ಳೆ ಸಾಂಗುನ್ ಆಟ್ ದಿಸ್ ಹೊಲ್ಲ್ಯಾ ಮಾನಾ, ಪೆದ್ರುಕ್,ಜುವಾಂವಾಕ್, ಅನಿ ಜಾಕೊಬಾಕ್ ಘೆವ್ನ್ ಜೆಜು ಮಾಗ್ನಿ ಕರುಕ್ ಮನುನ್ ಎಕ್ ಮಡ್ಡಿ ವರ್‍ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:28
18 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.


ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ನಾನಾದರೋ ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.


ಯೇಸು ಯಾಯಿರನ ಮನೆಗೆ ಹೋದನು. ಪೇತ್ರ, ಯೋಹಾನ, ಯಾಕೋಬ ಮತ್ತು ಹುಡುಗಿಯ ತಂದೆತಾಯಿಗಳಿಗೆ ಮಾತ್ರ ತನ್ನೊಂದಿಗೆ ಬರಲು ಅನುಮತಿಕೊಟ್ಟನು. ಬೇರೆ ಯಾರೂ ಒಳಗೆ ಬರಕೂಡದೆಂದು ಯೇಸು ತಿಳಿಸಿದನು.


ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು.


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.


ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು.


ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.


ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು.


ಯೇಸು ಆಗಾಗ್ಗೆ ನಿರ್ಜನ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದನು.


ಆಗ ಯೇಸು ಬೆಟ್ಟವನ್ನು ಹತ್ತಿ ತನ್ನ ಶಿಷ್ಯರ ಸಂಗಡ ಕುಳಿತುಕೊಂಡನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು