Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:31 - ಪರಿಶುದ್ದ ಬೈಬಲ್‌

31 ಇವರಿಬ್ಬರು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದರು. ಜೆರುಸಲೇಮಿನಲ್ಲಿ ಸಂಭವಿಸಲಿಕ್ಕಿದ್ದ ಆತನ ಮರಣದ ಬಗ್ಗೆ ಅವರು ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ ಸಂಭಾಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇವಿುನಲ್ಲಿ ಆತನು ನೆರವೇರಿಸಬೇಕಾಗಿದ್ದ ಮರಣದ ವಿಷಯವಾಗಿ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆನಿ ಸರ್‍ಗಾ ವೈಲ್ಯಾ ಮಹಿಮೆನ್ ಭರುನ್, ಜೆಜು ದೆವಾಚಿ ಯವ್ಜನ್ ಪುರಾ ಕರುಕ್, ಕಶೆ ಕಶೆ ಕರುನ್ ಜೆರುಜಲೆಮಾತ್ ಮರ್‍ನಾರ್ ಹಾಯ್, ಮನುನ್ ಬೊಲುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:31
14 ತಿಳಿವುಗಳ ಹೋಲಿಕೆ  

ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.


ಆಗ ಇಬ್ಬರು ಪ್ರವಾದಿಗಳು ಯೇಸುವಿನೊಡನೆ ಮಾತನಾಡುತ್ತಿದ್ದರು. ಅವರು ಮೋಶೆ ಮತ್ತು ಎಲೀಯ.


ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು