Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:51 - ಪರಿಶುದ್ದ ಬೈಬಲ್‌

51 ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಜೆಜುಕ್ ಸರ್‍ಗಾಕ್ ಘೆವ್ನ್ ಜಾತಲೊ ಎಳ್ ಜಗ್ಗೊಳ್-ಯೆವ್ನ್ಗೆತ್ ಹೊತ್ತೊ, ಜೆಜುನ್ ಅಪ್ನಾಚೆ ಮನ್ ಘಟ್ ಕರುನ್ ಘೆಟ್ಲ್ಯಾನ್, ಅನಿ ತೊ ಅಪ್ಲಿ ವಾಟ್ ಧರುನ್ ಜೆರುಜಲೆಮಾಕ್ ಜಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:51
29 ತಿಳಿವುಗಳ ಹೋಲಿಕೆ  

ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!


ಯೇಸು ಪ್ರತಿಯೊಂದು ಊರಿನಲ್ಲಿಯೂ ಹಳ್ಳಿಯಲ್ಲಿಯೂ ಉಪದೇಶಿಸುತ್ತಾ ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು.


ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನಯಾಜಕನಾಗಿದ್ದಾನೆ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.


ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.


ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ಈಗಲಾದರೋ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ‘ನೀನು ಎಲ್ಲಿಗೆ ಹೋಗುತ್ತಿರುವೆ?’ ಎಂದು ನನ್ನನ್ನು ಕೇಳಲಿಲ್ಲ.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ?


ಯೇಸು ಅವರನ್ನು ಆಶೀರ್ವದಿಸುತ್ತಿದ್ದಾಗ ಅವರಿಂದ ಬೇರ್ಪಟ್ಟು ಪರಲೋಕಕ್ಕೆ ಎತ್ತಲ್ಪಟ್ಟನು.


ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು.


ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು.


ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.


ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.


ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು