Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:11 - ಪರಿಶುದ್ದ ಬೈಬಲ್‌

11 ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:11
21 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ


ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.


ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.


ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.


ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಪ್ರಯಾಣ ಮಾಡಿದರು.


ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.”


ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು.


ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು.


ಆಗ ಇಬ್ರಿಯ ಮೇಸ್ತ್ರಿಗಳು ಫರೋಹನ ಬಳಿಗೆ ಹೋಗಿ, “ನಿನ್ನ ಸೇವಕರಾದ ನಮಗೆ ನೀನು ಯಾಕೆ ಈ ರೀತಿ ಮಾಡುತ್ತಿ?


ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.


ಆದ್ದರಿಂದ ಈಜಿಪ್ಟಿನ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತ್ರಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ.


ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.


ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು