Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:17 - ಪರಿಶುದ್ದ ಬೈಬಲ್‌

17 ಇದೊಂದು ಸಲ ನನ್ನ ಪಾಪಗಳನ್ನು ಕ್ಷಮಿಸಿ ಈ ‘ವಿಪತ್ತನ್ನು’ ನನ್ನಿಂದ ತೊಲಗಿಸಬೇಕೆಂದು ಯೆಹೋವನಿಗೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷವಿುಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:17
13 ತಿಳಿವುಗಳ ಹೋಲಿಕೆ  

ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನನ್ನಿಂದ ಮತ್ತು ನನ್ನ ಜನರ ಮೇಲಿಂದ ಕಪ್ಪೆಗಳನ್ನು ತೊಲಗಿಸಬೇಕೆಂದು ಯೆಹೋವನನ್ನು ಕೇಳಿಕೊಳ್ಳಿರಿ. ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ನಾನು ಆತನ ಜನರನ್ನು ಹೋಗಗೊಡಿಸುವೆನು” ಎಂದು ಹೇಳಿದನು.


ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.


ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.


ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಆ ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿಕೊಂಡರು. ಆ ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಆ ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.


ಈಗ ನಾನು ನಿನ್ನಲ್ಲಿ ಬೇಡಿಕೊಳ್ಳುತ್ತೇನೆ, ನನ್ನ ಪಾಪವನ್ನು ಕ್ಷಮಿಸು. ನನ್ನೊಂದಿಗೆ ಹಿಂದಿರುಗಿ ಬಾ, ಆಗ ನಾನು ಯೆಹೋವನನ್ನು ಆರಾಧಿಸಲು ಸಾಧ್ಯವಾಗುವುದು” ಎಂದು ಅವನನ್ನು ಬೇಡಿಕೊಂಡನು.


ಅದಕ್ಕೆ ಫರೋಹನು, “ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ” ಅಂದನು.


ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.


ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ಇರುವವು’” ಅಂದನು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು