Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:9 - ಪರಿಶುದ್ದ ಬೈಬಲ್‌

9 ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಅವನಿಗೆ, “ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಮೋಶೆ, “ನಾವು ಸರ್ವೇಶ್ವರ ಸ್ವಾಮಿಗಾಗಿ ಹಬ್ಬವನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡುಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಅವನಿಗೆ - ನಾವು ಯೆಹೋವನಿಗೆ ಜಾತ್ರೆಯನ್ನು ನಡಿಸಬೇಕಾಗಿದೆ; ಆದಕಾರಣ ಹುಡುಗರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡು ಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:9
19 ತಿಳಿವುಗಳ ಹೋಲಿಕೆ  

ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.


ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.


“ಏಳು ದಿನಗಳವರೆಗೆ ನೀವು ಕೇವಲ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು. ಏಳನೆಯ ದಿನದಲ್ಲಿ ಯೊಹೋವನ ಘನತೆಗಾಗಿ ಒಂದು ದೊಡ್ಡ ಹಬ್ಬ ಮಾಡಬೇಕು.


ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.


ಯೋಸೇಫನ ಕುಟುಂಬದಲ್ಲಿದ್ದ ಜನರು ಮತ್ತು ಅವನ ಸಹೋದರರು ಅವನೊಂದಿಗೆ ಹೋದರು. ಅವನ ತಂದೆಯ ಕುಟುಂಬದವರೆಲ್ಲ ಯೋಸೇಫನೊಂದಿಗೆ ಹೋದರು. (ಹೆಂಡತಿ, ಮಕ್ಕಳು ಮತ್ತು ಪ್ರಾಣಿಗಳು ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಉಳಿದುಕೊಂಡರು.)


ಫರೋಹನು ಅವರಿಗೆ, “ಯೆಹೋವನಾಣೆ, ನೀವು ನಿಮ್ಮ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಹೋಗಲು ನಾನು ಅನುಮತಿ ಕೊಡುವುದೇ ಇಲ್ಲ.


ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.


ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ! ನನ್ನನ್ನು ಆಶೀರ್ವದಿಸಿ!” ಎಂದು ಹೇಳಿದನು.


ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)


ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು