Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:4 - ಪರಿಶುದ್ದ ಬೈಬಲ್‌

4 ಮೋಶೆಯು ಜನರಿಗೆ, “ಯೆಹೋವನು ಹೀಗೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಫರೋಹನಿಗೆ ಇಂತೆಂದನು: “ಸರ್ವೇಶ್ವರ ಮಾಡಿರುವ ಅಪ್ಪಣೆ ಇದು: ‘ನಡುರಾತ್ರಿಯ ವೇಳೆಯಲ್ಲಿ ನಾನೇ ಈಜಿಪ್ಟಿನವರ ನಡುವೆ ಹಾದುಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆ ಫರೋಹನಿಗೆ - ಯೆಹೋವನು ಅಪ್ಪಣೆ ಮಾಡುವದೇನಂದರೆ - ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮೋಶೆಯು ಫರೋಹನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸುಮಾರು ಮಧ್ಯರಾತ್ರಿಯಲ್ಲಿ ನಾನು ಈಜಿಪ್ಟಿನ ಮಧ್ಯದಲ್ಲಿ ಹಾದು ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:4
12 ತಿಳಿವುಗಳ ಹೋಲಿಕೆ  

ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


“ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು.


ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.


ದ್ರಾಕ್ಷಿತೋಟಗಳಲ್ಲಿ ಜನರು ಯಾಕೆ ಅಳುವರು? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ.


ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.


ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.


ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.


ಆತನು ಯೋಸೇಫನನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು. ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು