Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:15 - ಪರಿಶುದ್ದ ಬೈಬಲ್‌

15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:15
28 ತಿಳಿವುಗಳ ಹೋಲಿಕೆ  

ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.


ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.


“ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.


ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.


ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು.


“ನೀವು ಯಜ್ಞಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು; “ಪಸ್ಕ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು.


“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.


ನಿಮ್ಮನ್ನು ಕಳವಳಪಡಿಸುತ್ತಿರುವವರು ತಮಗಾಗಿರುವ ಸುನ್ನತಿಯಲ್ಲದೆ ತಮ್ಮ ಅಂಗವನ್ನೇ ಕತ್ತರಿಸಿಕೊಂಡರೆ ಒಳ್ಳೆಯದು.


ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.


ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.


ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.


ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ.


“ಪಸ್ಕದ ಪಶುವನ್ನು ದೇಶದ ಬೇರೆ ಯಾವ ಸ್ಥಳದಲ್ಲಿಯೂ ಕೊಯ್ಯಬಾರದು.


ನೀವು ಇದನ್ನು ಯಾಕೆ ಮಾಡಬೇಕೆಂದರೆ, ಮಾಂಸದಲ್ಲಿ ರಕ್ತವು ಇನ್ನೂ ಇದ್ದರೆ, ಅದರ ಪ್ರಾಣವು ಇನ್ನೂ ಮಾಂಸದಲ್ಲಿ ಇದೆ. ಆದ್ದರಿಂದ ನಾನು ಇಸ್ರೇಲರಿಗೆ ಈ ಅಪ್ಪಣೆಯನ್ನು ಕೊಡುತ್ತೇನೆ. ರಕ್ತದಿಂದ ಕೂಡಿರುವ ಮಾಂಸವನ್ನು ತಿನ್ನಬಾರದು. ಯಾವನಾದರೂ ರಕ್ತ ಭೋಜನ ಮಾಡಿದರೆ, ಅವನು ತನ್ನ ಜನರಿಂದ ತೆಗೆದುಹಾಕಲ್ಪಡಬೇಕು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


“‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.


ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ


ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು