Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:3 - ಪರಿಶುದ್ದ ಬೈಬಲ್‌

3 ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದರ ವಿಷಯದಲ್ಲಿ ನೀವು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಅಪ್ಪಣೆ ಮಾಡಬೇಕಾದದ್ದೇನಂದರೆ - ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:3
26 ತಿಳಿವುಗಳ ಹೋಲಿಕೆ  

ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.


ಮರುದಿನ, ಯೇಸು ಜೆರುಸಲೇಮಿಗೆ ಬರುತ್ತಿದ್ದಾನೆ ಎಂಬ ಸುದ್ದಿ ಅಲ್ಲಿಯ ಜನರಿಗೆ ತಿಳಿಯಿತು. ಪಸ್ಕಹಬ್ಬಕ್ಕಾಗಿ ಬಂದಿದ್ದ ಅನೇಕರು ಅಲ್ಲಿದ್ದರು.


ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.


ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.


ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು.


ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಆಗ ಆರೋನನು ಜನರೊಂದಿಗೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸಿದನು. ಬಳಿಕ ಮೋಶೆ ಜನರೆಲ್ಲರೂ ನೋಡುವಂತೆ ಅದ್ಭುತಕಾರ್ಯಗಳನ್ನು ಮಾಡಿದನು.


ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು


ಹೇಬೆಲನು ತನ್ನ ಕುರಿಮಂದೆಯಿಂದ ಒಳ್ಳೆಯ ಚೊಚ್ಚಲ ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು. ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು;


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.


“‘ನಾಳೆ ಬೆಳಿಗ್ಗೆ ನೀವೆಲ್ಲರು ಯೆಹೋವನ ಮುಂದೆ ಬಂದು ನಿಲ್ಲಬೇಕು. ಎಲ್ಲಾ ಕುಲಗಳು ಯೆಹೋವನ ಮುಂದೆ ಬಂದು ನಿಲ್ಲಬೇಕು. ಯೆಹೋವನು ಒಂದು ಕುಲವನ್ನು ಸೂಚಿಸುತ್ತಾನೆ. ಆಗ ಆ ಕುಲ ಮಾತ್ರ ಮುಂದೆ ನಿಲ್ಲಬೇಕು. ಆಗ ಯೆಹೋವನು ಒಂದು ಗೋತ್ರವನ್ನು ಸೂಚಿಸುತ್ತಾನೆ. ಆಗ ಆ ಗೋತ್ರದವರು ಮಾತ್ರ ಯೆಹೋವನ ಮುಂದೆ ನಿಲ್ಲಬೇಕು. ಆಗ ಯೆಹೋವನು ಆ ಗೋತ್ರದ ಪ್ರತಿಯೊಂದು ಕುಟುಂಬವನ್ನು ನೋಡಿ, ಒಂದು ಕುಟುಂಬವನ್ನು ಸೂಚಿಸುತ್ತಾನೆ. ಬಳಿಕ ಯೆಹೋವನು ಆ ಕುಟುಂಬದ ಪ್ರತಿಯೊಬ್ಬ ಮನುಷ್ಯನನ್ನು ನೋಡುತ್ತಾನೆ.


ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.


ಆಗ ಯೆಹೋವನು ಮೋಶೆಗೆ, “ನೀನು ನನಗೆ ಮೊರೆಯಿಡುತ್ತಿರುವುದೇಕೆ? ಇಸ್ರೇಲರಿಗೆ ಮುಂದೆ ಹೋಗಲು ಆಜ್ಞಾಪಿಸು.


ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)


“ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.


ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.


ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.


ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಬರ್) ಹತ್ತನೇ ದಿವಸದಲ್ಲಿ ಯೆಹೋವನ ಆತ್ಮನಿಂದ ಪರವಶನಾದೆನು. ಬಾಬಿಲೋನಿಯರು ಜೆರುಸಲೇಮನ್ನು ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನ್ನನ್ನು ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು