Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:8 - ಪರಿಶುದ್ದ ಬೈಬಲ್‌

8 “ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು; ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:8
20 ತಿಳಿವುಗಳ ಹೋಲಿಕೆ  

“ನೀವು ಯಜ್ಞಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು; “ಪಸ್ಕ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು.


ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


“ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.


ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ಎಚ್ಚರಿಕೆಯಿಂದಿರಿ! “ಸ್ವಲ್ಪ ಹುಳಿಯಿಂದ ಪಾತ್ರೆಯಲ್ಲಿರುವ ನಾದಿದ ಹಿಟ್ಟೆಲ್ಲಾ ಹುಳಿಯಾಗುವುದು.”


ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.


ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.


ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು