17 ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು.
17 ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
17 ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.
17 ಫರೋಹನು ಇಸ್ರಾಯೇಲ್ಯರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟಾಗ ಫಿಲಿಷ್ಟಿಯರ ದೇಶದೊಳಗಣ ಮಾರ್ಗ ಹತ್ತಿರವಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ನಡಿಸದೆ ಕೆಂಪುಸಮುದ್ರದ ಬಳಿಯಲ್ಲಿರುವ ಮರಳು ಕಾಡಿನ ದಾರಿಯಲ್ಲಿಯೇ ಸುತ್ತಾಗಿ ನಡಿಸಿಕೊಂಡುಹೋದನು.
17 ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು.
ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.
ಆ ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ.
“ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’
ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.
ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.
ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು.
ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.”