Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:18 - ಪರಿಶುದ್ದ ಬೈಬಲ್‌

18 ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು - ಈ ಜನರಿಗೆ ಯುದ್ಧಪ್ರಾಪ್ತವಾದರೆ ಅವರು ಧೈರ್ಯಗೆಟ್ಟು ಐಗುಪ್ತದೇಶಕ್ಕೆ ಹಿಂದಿರುಗಾರು ಅಂದುಕೊಂಡನು. ಇಸ್ರಾಯೇಲ್ಯರು ಯುದ್ಧಸನ್ನದ್ಧರಾಗಿ ಐಗುಪ್ತದೇಶದಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:18
13 ತಿಳಿವುಗಳ ಹೋಲಿಕೆ  

“ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.


“ಪೀಹಹೀರೋತಿನ ಪೂರ್ವಕಡೆಯಲ್ಲಿ ಪ್ರಯಾಣ ಮಾಡಿ ಬಾಳ್ಚೆಫೋನಿಗೆ ಸಮೀಪದಲ್ಲಿರುವ ಮಿಗ್ದೋಲ್ ಮತ್ತು ಕೆಂಪು ಸಮುದ್ರದ ನಡುವೆ ಇಳಿದುಕೊಳ್ಳಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.


ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.


ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಈ ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.


ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.


ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ಮೋಶೆಯ ಆಜ್ಞೆಯನ್ನು ಪಾಲಿಸಿದರು. ಇವರು ಬೇರೆಯವರಿಗಿಂತ ಮುಂಚೆಯೇ ನದಿಯನ್ನು ದಾಟಿದರು. ಯೆಹೋವನು ವಾಗ್ದಾನ ಮಾಡಿದ ದೇಶವನ್ನು ಪಡೆಯಲು ಇಸ್ರೇಲರಿಗೆ ಸಹಾಯ ಮಾಡಲು ಇವರು ಯುದ್ಧಸನ್ನದ್ಧರಾಗಿ ಹೋಗುತ್ತಿದ್ದರು.


ಯುದ್ಧಸನ್ನದ್ಧರಾದ ಸುಮಾರು ನಲವತ್ತು ಸಾವಿರ ಭಟರು ಯೆಹೋವನ ಮುಂದೆ ಜೆರಿಕೊವಿನ ಬಯಲಿನ ಕಡೆಗೆ ಹೋದರು.


ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು.


ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ಚೆಫೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.


ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು