Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:21 - ಪರಿಶುದ್ದ ಬೈಬಲ್‌

21 ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:21
30 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ನೀನು ಊದಿದ ಮಹಾಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು.


ಆತನು ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು. ಆತನ ಜನರು ಕಾಲುನಡಿಗೆಯಿಂದ ನದಿಯನ್ನು ದಾಟಿದರು. ಅದಕ್ಕಾಗಿ ನಾವು ಆತನಲ್ಲಿ ಉಲ್ಲಾಸಪಡೋಣ.


ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.


ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.


ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ.


ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.


ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ ಎಂದು ನೀವು ಮಕ್ಕಳಿಗೆ ಹೇಳಬೇಕು.


ಆತನು ಕೆಂಪು ಸಮುದ್ರವನ್ನು ಎರಡು ಭಾಗವನ್ನಾಗಿ ಮಾಡಿದನು. ಆತನ ಪ್ರೀತಿ ಶಾಶ್ವತವಾದದ್ದು.


ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.


“ಯೆಹೋವನೆಂಬ ನಾನೇ ನಿಮ್ಮ ದೇವರು. ನಾನು ಸಾಗರವನ್ನು ಕದಡಿಸಿ ತೆರೆಗಳನ್ನು ಬರಮಾಡುತ್ತೇನೆ.” (ಸರ್ವಶಕ್ತನು ಎಂಬುದೇ ನನ್ನ ಹೆಸರು.)


ದೇವರ ಶಕ್ತಿಯು ಸಮುದ್ರವನ್ನು ಪ್ರಶಾಂತಗೊಳಿಸುವುದು. ದೇವರ ಶಕ್ತಿಯು ರಹಬನ ಸಹಾಯಕರನ್ನು ನಾಶಮಾಡುವುದು.


ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.


ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.


ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.


ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.


ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ.


ಆ ಸ್ಥಳದಲ್ಲಿ ನೆಲವು ಒಣಗಿತ್ತು; ಯಾಜಕರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನದಿಯ ಮಧ್ಯದವರೆಗೆ ತೆಗೆದುಕೊಂಡು ಹೋಗಿ ಅಲ್ಲಿ ನಿಂತುಕೊಂಡರು. ಯಾಜಕರು ಅಲ್ಲಿಯೇ ನಿಂತುಕೊಂಡಿರಲಾಗಿ ಎಲ್ಲಾ ಇಸ್ರೇಲರು ಒಣನೆಲದ ಮೇಲೆ ನಡೆದುಕೊಂಡು ಹೋಗಿ ಜೋರ್ಡನ್ ನದಿಯನ್ನು ದಾಟಿದರು.


ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.


ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.


ಯೆಹೋವನು ಸಮುದ್ರದ ಮೂಲಕ ಮಾರ್ಗವನ್ನು ನಿರ್ಮಿಸುವನು. ಅಲ್ಲೋಲಕಲ್ಲೋಲವಾಗಿರುವ ನೀರಿನ ಮೂಲಕ ತನ್ನ ಜನರಿಗೆ ಮಾರ್ಗವನ್ನು ಮಾಡುವನು. ಯೆಹೋವನು ಹೇಳುವುದೇನೆಂದರೆ,


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಆಳವಾದ ಸಮುದ್ರದೊಳಗಿಂದ ಯೆಹೋವನು ತನ್ನ ಜನರನ್ನು ನಡೆಸಿದನು. ಕುದುರೆಯು ಮರುಭೂಮಿಯಲ್ಲಿ ನಡೆಯುವಂತೆ ಜನರು ಎಡವಿಬೀಳದೆ ನಡೆದರು.


ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?


ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟುಬರುವ ಸ್ಥಳಕ್ಕೂ ನೀನು ಎಂದಾದರೂ ಹೋಗಿರುವಿಯಾ?


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು