Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:22 - ಪರಿಶುದ್ದ ಬೈಬಲ್‌

22 ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:22
12 ತಿಳಿವುಗಳ ಹೋಲಿಕೆ  

ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು.


ಸೌಲನು ಅಮಾಲೇಕ್ಯರನ್ನು ಸೋಲಿಸಿದನು. ಅವನು ಹವೀಲಾದಿಂದ ಈಜಿಪ್ಟಿನ ಗಡಿಯಲ್ಲಿರುವ ಶೂರಿನವರೆಗೂ ಅವರೊಡನೆ ಹೋರಾಡಿದನು.


ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.


ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.


ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು.


ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ ಸುರಕ್ಷಿತವಾಗಿ ಮುನ್ನಡೆಸಿದನು. ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು.


ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಇಸ್ರೇಲರೆಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡಿದರು. ಅವರು ರೆಫೀದೀಮಿಗೆ ಪ್ರಯಾಣಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು