Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:5 - ಪರಿಶುದ್ದ ಬೈಬಲ್‌

5 ಸಾಗರವು ಅವರನ್ನು ಮುಚ್ಚಿಕೊಂಡಿತು; ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಾಗರವು ಅವರನ್ನು ಮುಚ್ಚಿಬಿಟ್ಟಿತು; ಕಲ್ಲಿನಂತೆ ಧಡಲ್ಲೆಂದು ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:5
12 ತಿಳಿವುಗಳ ಹೋಲಿಕೆ  

ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.


ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ ಸಮುದ್ರವು ಅವರನ್ನು ಮುಚ್ಚಿಕೊಂಡಿತು; ಅವರು ಸೀಸದಂತೆ ಅಗಾಧವಾದ ಸಮುದ್ರದಲ್ಲಿ ಮುಳುಗಿದರು.


ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ. ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದುಹೋದರು.


ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ.


“ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


“ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ಅವರ ಶತ್ರುಗಳನ್ನು ಸಮುದ್ರದಲ್ಲಿ ಮುಳುಗಿಸಿಬಿಟ್ಟನು. ಅವರ ಶತ್ರುಗಳಲ್ಲಿ ಒಬ್ಬರೂ ತಪ್ಪಿಸಿಕೊಳ್ಳಲಾಗಲಿಲ್ಲ!


ನಾನು ಸಾಗರಗಳಿಗಿಂತ ಮೊದಲೇ ಜನಿಸಿದೆನು; ಬುಗ್ಗೆಗಳ ನೀರು ಉಂಟಾಗುವುದಕ್ಕಿಂತ ಮೊದಲೇ ಜನಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು