Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:12 - ಪರಿಶುದ್ದ ಬೈಬಲ್‌

12 “ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ - ಸಾಯಂಕಾಲದಲ್ಲಿ ಮಾಂಸವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಯೆಹೋವನೆಂಬದು ನಿಮಗೆ ಗೊತ್ತಾಗುವದೆಂದು ಹೇಳಬೇಕು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:12
17 ತಿಳಿವುಗಳ ಹೋಲಿಕೆ  

“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ಆಗ ನಾನು ಅವರ ದೇವರೆಂದೂ ನಾನು ಅವರೊಂದಿಗೆ ಇದ್ದೇನೆ ಎಂದೂ ಅವರು ತಿಳಿದುಕೊಳ್ಳುವರು. ಇಸ್ರೇಲ್ ಜನಾಂಗವು ಸಹ ತಾವು ನನ್ನ ಜನರು ಎಂದು ತಿಳಿದುಕೊಳ್ಳುವರು.” ಇದು ಒಡೆಯನಾದ ಯೆಹೋವನ ನುಡಿ.


“ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನ್ನು ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು.


ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು.


ಆಗ ದೇವರು, “ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು.


ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು.


ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು