Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:20 - ಪರಿಶುದ್ದ ಬೈಬಲ್‌

20 ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದಾಗ್ಯೂ ಅವರಲ್ಲಿ ಕೆಲವರು ಮೋಶೆಯ ಮಾತನ್ನು ಕೇಳದೆ ಅದರಲ್ಲಿ ಸ್ವಲ್ಪವನ್ನು ಮರುದಿವಸದ ತನಕ ಇಟ್ಟುಕೊಂಡರು. ಆಗ ಅದು ಹುಳು ಬಿದ್ದು, ನಾತಹಿಡಿದು, ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಸಿಟ್ಟುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದಾಗ್ಯೂ ಅವರಲ್ಲಿ ಕೆಲವರು ಮೋಶೆಯ ಮಾತನ್ನು ಕೇಳದೆ ಅದರಲ್ಲಿ ಸ್ವಲ್ಪವನ್ನು ಮರುದಿವಸದ ತನಕ ಇಟ್ಟುಕೊಂಡಾಗ ಅದು ಹುಳಬಿದ್ದು ನಾತಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಸಿಟ್ಟುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನವರೆಗೆ ಇಟ್ಟುಕೊಂಡಾಗ, ಅದು ಹುಳ ಬಿದ್ದು ಹೊಲಸುವಾಸನೆ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:20
13 ತಿಳಿವುಗಳ ಹೋಲಿಕೆ  

ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.


ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.


ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.


“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.


ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.


(ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.)


ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.


ಪ್ರತಿ ಮುಂಜಾನೆ ಅವರು ಆಹಾರವನ್ನು ಕೂಡಿಸಿಕೊಂಡರು. ಪ್ರತಿಯೊಬ್ಬನು ತಾನು ಎಷ್ಟು ತಿನ್ನಬಹುದೋ ಅಷ್ಟನ್ನೇ ಕೂಡಿಸಿಕೊಂಡನು. ಆದರೆ ಬಿಸಿಲೇರಿದಾಗ ಆಹಾರವು ಕರಗಿಹೋಯಿತು.


ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆ ಆಹಾರಕ್ಕೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು