Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:29 - ಪರಿಶುದ್ದ ಬೈಬಲ್‌

29 ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೋಡಿರಿ, ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಾನು ಅಪ್ಪಣೆ ಮಾಡಿರುವದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು; ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:29
9 ತಿಳಿವುಗಳ ಹೋಲಿಕೆ  

“ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ.


ಅವರ ವಿಶ್ರಾಂತಿ ದಿವಸಗಳ ಬಗ್ಗೆ ತಿಳಿಸಿದೆನು. ಆ ವಿಶೇಷ ದಿವಸಗಳು ನನಗೂ ಅವರಿಗೂ ಇರುವ ಸಂಬಂಧಕ್ಕೆ ಒಂದು ಗುರುತಾಗಿತ್ತು. ನಾನೇ ಯೆಹೋವನೆಂದೂ ನಾನು ಅವರನ್ನು ನನಗೆ ವಿಶೇಷವಾದವರನ್ನಾಗಿ ಮಾಡಿಕೊಳ್ಳುತ್ತಿರುವೆನೆಂದೂ ಅವು ತೋರಿಸುತ್ತಿದ್ದವು.


ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.


ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.


ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?


ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು.


ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳ ಬೆಳೆಯಷ್ಟಾಗುವದು.


ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು