Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:31 - ಪರಿಶುದ್ದ ಬೈಬಲ್‌

31 ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇಸ್ರಾಯೇಲ್ಯರು ಆ ಆಹಾರಕ್ಕೆ ಮನ್ನ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಕಲಸಿದ ದೋಸೆಗಳ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:31
8 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.


ಸೂರ್ಯನು ಮೇಲಕ್ಕೇರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು.


ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು.


ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.


ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.


ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು