Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:35 - ಪರಿಶುದ್ದ ಬೈಬಲ್‌

35 ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:35
16 ತಿಳಿವುಗಳ ಹೋಲಿಕೆ  

ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು.


ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.


ಒಂದೇ ಆತ್ಮಿಕ ಆಹಾರವನ್ನು ಊಟ ಮಾಡಿದರು;


“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.


ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


ಆತನು ನಿಮ್ಮನ್ನು ಕಾಪಾಡಿ ಸಂರಕ್ಷಿಸಿದ್ದರಿಂದ ಈ ನಲವತ್ತು ವರ್ಷ ನಿಮ್ಮ ಬಟ್ಟೆಗಳು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದಿಕೊಳ್ಳಲಿಲ್ಲ.


ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು