Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:10 - ಪರಿಶುದ್ದ ಬೈಬಲ್‌

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:10
24 ತಿಳಿವುಗಳ ಹೋಲಿಕೆ  

ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.


ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಬಳಿಕ ಆರೋನನು ಅವರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಕೊಟ್ಟನು. ಆರೋನನು ಅವರನ್ನು ಶುದ್ಧೀಕರಿಸುವುದಕ್ಕಾಗಿ ದೋಷಪರಿಹಾರ ಮಾಡಿದನು.


ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.


ಅವರನ್ನು ಶುದ್ಧೀಕರಿಸುವ ಕ್ರಮ ಹೇಗೆಂದರೆ, ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮಿಕಿಸಬೇಕು. ಬಳಿಕ ಅವರು ಸರ್ವಾಂಗಕ್ಷೌರ ಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಹೀಗೆ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


“ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಹೆಚ್ಚು ಉತ್ಸುಕತೆಯಲ್ಲಿದ್ದರು.


ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


“ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ.


“ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.


ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು