ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.
ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.
“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.
ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”
ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.
ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.