Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:19 - ಪರಿಶುದ್ದ ಬೈಬಲ್‌

19 ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಮೋಶೆಗೆ - ನೀನೇ ನಮ್ಮ ಸಂಗಡ ಮಾತಾಡು; ನಾವು ಕೇಳುವೆವು. ದೇವರು ನಮ್ಮ ಸಂಗಡ ಮಾತಾಡಿದರೆ ನಾವು ಸತ್ತೇವು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:19
9 ತಿಳಿವುಗಳ ಹೋಲಿಕೆ  

ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.


ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.


ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.


ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.


ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.


ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು