Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:3 - ಪರಿಶುದ್ದ ಬೈಬಲ್‌

3 “ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:3
37 ತಿಳಿವುಗಳ ಹೋಲಿಕೆ  

‘ನೀವು ನನ್ನ ಹೊರತು ಬೇರೆ ಯಾವ ದೇವರುಗಳನ್ನೂ ಪೂಜಿಸಬಾರದು.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ಪರದೇಶದವರು ಆರಾಧಿಸುವ ಯಾವ ಸುಳ್ಳು ದೇವರುಗಳನ್ನೂ ಪೂಜಿಸಬೇಡ.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಬೇರೆ ದೇವರುಗಳನ್ನು ಅನುಸರಿಸಬೇಡಿರಿ; ಅವುಗಳ ಸೇವೆ ಮಾಡಬೇಡಿರಿ; ಅವುಗಳನ್ನು ಪೂಜಿಸಬೇಡಿರಿ. ಮನುಷ್ಯ ನಿರ್ಮಿತವಾದ ವಿಗ್ರಹಗಳನ್ನು ಪೂಜಿಸಬೇಡಿ. ನೀವು ಪೂಜಿಸಿದರೆ ನಿಮ್ಮ ಮೇಲೆ ನಾನು ಕೋಪಗೊಂಡು ನಿಮಗೆ ಕೇಡುಮಾಡುವೆನು” ಎಂದು ಹೇಳಿದರು.


ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.


ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ಪರಲೋಕದಲ್ಲಿ ನೀನಲ್ಲದೆ ನನಗೆ ಬೇರೆ ಯಾರ ಅಗತ್ಯವಿದೆ? ಈ ಲೋಕದಲ್ಲಿ ನಿನ್ನನ್ನಲ್ಲದೆ ಬೇರೆ ಯಾರನ್ನು ಬಯಸಲಿ?


ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.


ಆದರೆ ಆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ನಾನು ನಿನ್ನಂತೆ, ಈ ಪುಸ್ತಕದಲ್ಲಿರುವ ವಾಕ್ಯಗಳಿಗೆ ವಿಧೇಯರಾಗಿರುವ ಎಲ್ಲ ಜನರಂತೆ ಮತ್ತು ನಿನ್ನ ಸಹೋದರರಾದ ಪ್ರವಾದಿಗಳಂತೆ ಒಬ್ಬ ಸೇವಕನು. ನೀನು ದೇವರನ್ನು ಆರಾಧಿಸಬೇಕು!” ಎಂದು ಹೇಳಿದನು.


ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು.


“ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


“ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”


ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.


ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ. ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.


ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು