Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:8 - ಪರಿಶುದ್ದ ಬೈಬಲ್‌

8 “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:8
22 ತಿಳಿವುಗಳ ಹೋಲಿಕೆ  

“ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಜ್ಞಾಪಕಮಾಡಿಕೊಂಡು ನನ್ನ ಪವಿತ್ರಸ್ಥಳವನ್ನು ಸನ್ಮಾನಿಸಿರಿ. ನಾನೇ ಯೆಹೋವನು!


“ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!


ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.


“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


“ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು!


“ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.


‘ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.


ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.


ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.


ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”


ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.


ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’” ಇದು ಯೆಹೋವನ ನುಡಿ. “‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.


ತರುವಾಯ ಯೆಹೋವನು ಮೋಶೆಗೆ ಹೀಗೆಂದನು:


ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು:


ಇಸ್ರೇಲರು ಇನ್ನೂ ಮರುಭೂಮಿಯಲ್ಲಿದ್ದಾಗ ಒಬ್ಬನು ಸಬ್ಬತ್‌ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಅವರಲ್ಲಿ ಕೆಲವರು ಕಂಡರು.


ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.


ನಾನು ನೇಮಿಸಿದ ಸಬ್ಬತ್ ದಿವಸಗಳು ಮಹತ್ವವಾದವುಗಳೆಂದು ಎಣಿಸಿರಿ. ನನ್ನ ಮತ್ತು ನಿಮ್ಮ ಸಂಬಂಧಕ್ಕೆ ಅವು ಗುರುತುಗಳಾಗಿವೆ. ನಾನು ನಿಮ್ಮ ಕರ್ತನು. ನಾನೇ ನಿಮ್ಮ ದೇವರಾದ ಯೆಹೋವನೆಂದು ತಿಳಿದುಕೊಳ್ಳಲು ಇವುಗಳು ಸಾಕ್ಷಿಗಳಾಗಿವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು