Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:26 - ಪರಿಶುದ್ದ ಬೈಬಲ್‌

26 “ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಒಬ್ಬನು ತನ್ನ ದಾಸನ ಅಥವಾ ದಾಸಿಯ ಕಣ್ಣಿಗೆ ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ ಆ ದಾಸನನ್ನು ಬಿಡುಗಡೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟ ಪಡಿಸಿದರೆ ಆದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:26
14 ತಿಳಿವುಗಳ ಹೋಲಿಕೆ  

ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.


ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.


ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”


ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


“ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು.


ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.


ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.


ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು, ಕೈಗೆ ಪ್ರತಿಯಾಗಿ ಕೈ, ಕಾಲಿಗೆ ಪ್ರತಿಯಾಗಿ ಕಾಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು