Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:6 - ಪರಿಶುದ್ದ ಬೈಬಲ್‌

6 ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:6
24 ತಿಳಿವುಗಳ ಹೋಲಿಕೆ  

ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.


ಅವನು ಕೂಲಿಯಾಳಿನಂತೆಯೂ ಜ್ಯೂಬಿಲಿ ವರ್ಷದವರೆಗೆ ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆಯೂ ಇರುವನು.


ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ಆ ಹಿರಿಯರು, “ಇಂದು ನೀನು ಅವರಿಗೆ ಸೇವಕನಂತೆ ಇರುವುದಾದರೆ, ಅವರು ನಿನ್ನ ಸೇವೆಯನ್ನು ನಿಜವಾಗಿಯೂ ಮಾಡುತ್ತಾರೆ. ನೀನು ಅವರೊಂದಿಗೆ ಕರುಣೆಯಿಂದ ಮಾತಾಡಿದರೆ, ಅವರು ಎಂದೆಂದಿಗೂ ನಿನಗಾಗಿ ದುಡಿಯುತ್ತಾರೆ” ಎಂದರು.


ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.


ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.


“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.


“ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.


“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


“ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”


“ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದದೆ ಇಲ್ಲೇ ಇರುವೆನು’ ಎಂದು ಹೇಳಬೇಕು.


“ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.


“ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ,


ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು