Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:8 - ಪರಿಶುದ್ದ ಬೈಬಲ್‌

8 ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳನ್ನು ತನಗಾಗಿ ಗೊತ್ತುಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಅವನಿಂದ ಬಿಡಿಸಿಕೊಳ್ಳಲು ಅವಳಿಗೆ ಅವಕಾಶಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದುದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವಳನ್ನು ಗೊತ್ತು ಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಬಿಡಿಸಿಕೊಳ್ಳಲಿಕ್ಕೆ ಅವಳಿಗೆ ಅನುಕೂಲಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದದರಿಂದ ಅನ್ಯಜನರಿಗೆ ಅವಳನ್ನು ಮಾರುವದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:8
13 ತಿಳಿವುಗಳ ಹೋಲಿಕೆ  

ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯೊಡನೇ ಮದುವೆಮಾಡಿಸಿ. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು.


ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.


ನಿಮ್ಮಲ್ಲಿ ಯಾರಾದರೂ ಮದುವೆಯಾಗಲು ಹೆಣ್ಣನ್ನು ನಿಶ್ಚಯಿಸಿದ್ದರೆ ಅವನು ತನ್ನ ಮನೆಗೆ ಹಿಂತಿರುಗಿಹೋಗಲಿ; ಯಾಕೆಂದರೆ ಅವನು ರಣರಂಗದಲ್ಲಿ ಮಡಿದರೆ ಅವನಿಗೆ ನಿಶ್ಚಯವಾದ ಹೆಣ್ಣನ್ನು ಇನ್ನೊಬ್ಬನು ಮದುವೆ ಮಾಡಿಕೊಳ್ಳಬಹುದು’ ಎಂದು ಹೇಳುವರು.


ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು.


ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು.


ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.


ಹೆಂಗಸರ ಈ ಹಾಡಿನಿಂದ ಸೌಲನು ಬಹಳವಾಗಿ ವ್ಯಸನಗೊಂಡನು ಮತ್ತು ರೋಷಗೊಂಡನು. “ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು ಎಂದು ಇವರು ಹಾಡುತ್ತಾರಲ್ಲಾ, ಇವನಿಗೆ ರಾಜ್ಯವೊಂದನ್ನು ಬಿಟ್ಟು ಬೇರೆ ಏನು ಕಡಿಮೆಯಾಯಿತು?” ಎಂದು ಆಲೋಚಿಸತೊಡಗಿದನು. “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದ ಹೆಂಗಸರ ಮಾತುಗಳಿಂದ ಸೌಲನು ಚಿಂತೆಗೀಡಾದನು.


ಹೀಗೆ ಹಿರಿಯರೆಲ್ಲರು ತಮ್ಮನ್ನು ಮುನ್ನಡೆಸಲು ರಾಜನೊಬ್ಬನು ಬೇಕೆಂದರು. ಸಮುವೇಲನಿಗೆ ಇದು ಸರಿಯೆನಿಸಲಿಲ್ಲ. ಆದ್ದರಿಂದ ಅವನು ಯೆಹೋವನಲ್ಲಿ ಪ್ರಾರ್ಥಿಸಿದನು.


“ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.


ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಸೊಸೆಯಾಗಿ ನೋಡಿಕೊಳ್ಳಬೇಕು.


ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು