Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:17 - ಪರಿಶುದ್ದ ಬೈಬಲ್‌

17 ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವಳ ತಂದೆ ಅವಳನ್ನು ಅವನಿಗೆ ಕೊಡಲು ಒಪ್ಪದೆ ಹೋದರೆ ಆ ವ್ಯಕ್ತಿ ತಕ್ಕ ತೆರವನ್ನು ಹೇಗೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವಳ ತಂದೆ ಅವಳನ್ನು ಅವನಿಗೆ ಕೊಡುವದಕ್ಕೆ ಒಪ್ಪದೆ ಹೋದರೆ ಆ ಮನುಷ್ಯನು ತಕ್ಕ ತೆರವನ್ನು ಹೇಗೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಕೆಯ ತಂದೆಗೆ ಆಕೆಯನ್ನು ಕೊಡುವುದಕ್ಕೆ ಮನಸ್ಸಿಲ್ಲದಿದ್ದರೆ, ಅವನಿಗೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:17
9 ತಿಳಿವುಗಳ ಹೋಲಿಕೆ  

ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.


ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.


ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲೆ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.


ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.


“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.


ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.


ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು