Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:20 - ಪರಿಶುದ್ದ ಬೈಬಲ್‌

20 “ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೊಬ್ಬನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞಮಾಡುವವನನ್ನು ನಾಶಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:20
20 ತಿಳಿವುಗಳ ಹೋಲಿಕೆ  

“ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.


ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


“ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.


ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.


“‘ನಾನು ಇಸ್ರೇಲ್ ಜನಾಂಗದವರಿಗೆ, ಅವರಲ್ಲಿದ್ದ ಅಸಹ್ಯವಾದ ಎಲ್ಲಾ ವಿಗ್ರಹಗಳನ್ನು ಬಿಸಾಡಿಬಿಡಲು ಹೇಳಿದೆನು. ಈಜಿಪ್ಟಿನ ಹೊಲಸು ವಿಗ್ರಹಗಳಿಂದ ಹೊಲಸು ಆಗಬಾರದು ಎಂದು ಹೇಳಿದೆನು. “ನಾನು ನಿಮ್ಮ ದೇವರಾದ ಯೆಹೋವನು” ಎಂಬುದಾಗಿ ಹೇಳಿದೆನು.


“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


“ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.


ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.


ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು.


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು