Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:22 - ಪರಿಶುದ್ದ ಬೈಬಲ್‌

22 “ನೀವೆಂದಿಗೂ ವಿಧವೆಯರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:22
23 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ವಿಧವೆಯರಿಗೂ ಅನಾಥರಿಗೂ ಹಾನಿಮಾಡಬೇಡಿರಿ. ಅಪರಿಚಿತರಿಗೂ ಬಡವರಿಗೂ ಕೇಡುಮಾಡಬೇಡಿ. ಒಬ್ಬರಿಗೊಬ್ಬರು ಕೇಡುಮಾಡಲು ಯೋಚಿಸಲೂಬೇಡಿ!’”


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.


ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.


“ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು.


ಜಮೀನಿನ ಮೇರೆಯನ್ನು ಎಂದಿಗೂ ಒತ್ತಬೇಡ. ಅನಾಥರಿಗೆ ಸೇರಿದ ಭೂಮಿಯನ್ನು ಎಂದಿಗೂ ಕಸಿದುಕೊಳ್ಳಬೇಡ.


ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ.


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು. ಆತನು ದಿಕ್ಕಿಲ್ಲದವರ ಕೂಗನ್ನು ಕೇಳಿದನು.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.


ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು